-
Ava siriyali neenu
Composer : Shri Kanakadasaru ಆವ ಸಿರಿಯಲಿ ನೀನು ಎನ್ನ ಮರೆತೆದೇವ ಜಾನಕಿರಮಣ ಪೇಳು ರಘುಪತಿಯೆ |ಪ| ಸುರರ ಸೆರೆಯನು ಬಿಡಿಸಿ ಬಂದೆನೆಂಬಾ ಸಿರಿಯೆಕರಿ ಮೊರೆಯ ಲಾಲಿಸಿದೆನೆಂಬ ಸಿರಿಯೆಶರಧಿ ಸೇತುವೆಯ ಕಟ್ಟಿದೆನೆನ್ನುವಾ ಸಿರಿಯೆಸ್ಥಿರವಾಗಿ ಹೇಳೆನಗೆ ಹೇಳು ರಘುಪತಿಯೆ |೧| ಕಡಲೊಳಗೆ ಮನೆ ಮಾಡಿ ಮಲಗಿದೆನೆಂಬಾ ಸಿರಿಯೆಮೃಡ ನಿನ್ನ ಸಖನಾದನೆಂಬ ಸಿರಿಯೆಬಿಡದೆ ದ್ರೌಪದಿ ಮಾನ ಕಾಯ್ದನೆಂಬ ಸಿರಿಯೆದೃಢವಾಗಿ ಹೇಳೆನಗೆ ದೇವಕೀಸುತನೆ |೨| ಭೂಮಿಯನು ಮೂರಡಿಯ ಮಾಡಿದೆನೆಂಬ ಸಿರಿಯೆಕಾಮ ನಿನ್ನ ಸುತನಾದನೆಂಬ ಸಿರಿಯೆಆ ಮಹಾಲಕುಮಿ ನಿನ್ನ ಸತಿಯಾದಳೆಂಬ ಸಿರಿಯೆಪ್ರೇಮದಲಿ ಹೇಳೆನಗೆ…
-
Angaladolu Ramanadida
Composer : Shri Kanakadasaru ಅಂಗಳದೊಳು ರಾಮ ನಾಡಿದಚಂದ್ರ ಬೇಕೆಂದು ತಾ ಹಟ ಮಾಡಿದಾ |ಪ| ತಾಯಿಯ ಕರೆದು ಕೈಮಾಡಿ ತೋರಿದಾಮುಗಿಲ ಕಡೆಗೊಮ್ಮೆ ದಿಟ್ಟಿಸಿ ನೋಡಿದ – ರಾಮಚಿಣಿಕೋಲು ಚಂಡು ಬುಗುರಿ ಎಲ್ಲವಬೆಡ ಬೆಡ ಎಂದು ತಾ ಬಿಸಾಡಿದಾ || ೧ || ಕನ್ದ ಬಾ ಎನ್ದು ತಾಯಿ ಕರೆದಳುಮಮ್ಮು ಉಣ್ಣೆಂದು ಬಣ್ಣಿಸುತಿದ್ದಳು – ತಾಯಿತಾಯಿ ಕೌಸಲ್ಯ ಕಳವಳ ಗೊಂಡಳುಕನ್ದ ಅಂಜಿದನು ಎನ್ನು ತಿದ್ದಳು || ೨ || ಅಳುವ ಧ್ವನಿ ಕೇಳಿ ರಾಜನುಮಂತ್ರಿ ಸಹಿತಾಗಿ ಧಾವಿಸಿ…
-
Bheemanembuvange
Composer : Shri Kanakadasaru ಭೀಮನೆಂಬುವಂಗೆ ಯಾತರ ಭಯವಿಲ್ಲ ಭೀಮರಾಯ [ಪ]ಕಾಮಿತ ಫಲಗಳ ಕೊಟ್ಟು ನೀ ಸಲಹಯ್ಯ ಭೀಮರಾಯ [ಅ] ಅಂಜನೆಯಾತ್ಮಜ ಅಗಣಿತ ಬಲವಂತ ಭೀಮರಾಯಕಂಜನಾಭನ ದೂತ ಕರುಣಿಸೊ ಬಲವಂತ ಭೀಮರಾಯ (೧) ಕಟ್ಟಿದ ಪೂಮಾಲೆ ಕಸ್ತೂರಿ ನಾಮದ ಭೀಮರಾಯ –ಪೊಂಬಟ್ಟೆ ಪೀತಾಂಬರವನುಟ್ಟು ಮೆರೆವಂಥ ಭೀಮರಾಯ (೨) ವಾರಿಧಿಯನು ದಾಟಿ ಸೀತೆಗುಂಗುರವಿತ್ತ ಭೀಮರಾಯಸೂರಿವೆಗ್ಗಳತನ ಕಿತ್ತು ಈಡಾಡಿದ ಭೀಮರಾಯ(೩) ರಾಮರಾಯರಿಗೆ ನೀ ಪ್ರೇಮದ ಬಂಟನು ಭೀಮರಾಯಕಾಮಿತ ಫಲವಿತ್ತು ಕರುಣದಿ ಸಲಹಯ್ಯ ಭೀಮರಾಯ (೪) ಛಪ್ಪನ್ನ ದೇಶಕ್ಕೆ ಒಪ್ಪುವ ಕಾಗಿನೆಲೆಯ…
