-
Enu Karana Baya
Composer : Shri Kanakadasaru ಏನು ಕಾರಣ ಬಾಯ ತೆರೆದಿ ಪೇಳೆಲೊ ದೇವದಾನವಾಂತಕ ಅಹೋಬಲ ನಾರಸಿಂಹ ||ಪ|| ನಿಗಮ ಚೋರಕನಾ ಕೊಲಲು ತೆರೆದೆಯೊ ಬಾಯನಗವ ಬೆನ್ನಲಿ ಪೊತ್ತು ನಡುಗಿ ತೆರೆದೆಯೊ ಬಾಯಭೂಮಿಗಳ್ಳನ ಕೊಂದು ಬಳಲಿ ತೆರೆದೆಯೊ ಬಾಯಜಗವರಿಯೆ ಪೇರುರವಿರಿದ, ಪ್ರಹ್ಲಾದವರದನರಸಿಂಹ ನರಸಿಂಹ ||೧|| ಬಲಿಯ ದಾನವ ಬೇಡಲೆಂದು ತೆರೆದೆಯೊ ಬಾಯಛಲದಿಂದ ಕ್ಷತ್ರಿಯರ ಕೊಲಲು ತೆರೆದೆಯೊ ಬಾಯಕುಲಸತಿಯ ಅರಸಿ ಕಾಣದೆ ತೆರೆದೆಯೊ ಬಾಯಮಲೆತು ಮಾವನ ಕೊಂದು ನಿಂತೆ,ಇಂಥಾ ಭೂಮಿಗಿಳಿದನಾರಸಿಂಹ ನರಸಿಂಹ || ೨|| ನಾರಿಯರ ಚೆಲ್ವಿಕೆಯ ನೋಡಿ ತೆರೆದೆಯೊ…
-
Shri Narasimha deva
Composer : Shri Helavanakatte Giriyamma ಶ್ರೀ ನರಸಿಂಹದೇವ ಶರಣ ರಕ್ಷಕನೆದಾನವಾರಿ ಸುಭಕ್ತಾಧೀನ ಮೂರುತಿಯೆ ||ಪ.|| ಹರಿ ತನ್ನ ದೈವವೆಂದು ಸ್ಮರಿಸುತಿರಲು ಬಾಲನಿರವ ಕಾಣದೆ ದುಷ್ಟ ಹಿರಣ್ಯಕಾಸುರನುಪರಿ ಪರಿ ಹಿಂಸಿಸೆ ಮೊರೆದು ಕೋಪದೊಳೆದ್ದುತರಳಗೊಲಿದೆ ಬಹು ಕರುಣಾನಿಧಿಯೆ [೧] ಛಿಟಿ ಛಿಟಿಲೆಂದಾರ್ಭಟಿಸಿ ಕಂಬವು ಸಿಡಿಯೆಕಟಿ ಕಟಿ ಮಸಿದಗ್ನಿ ನಿಟ್ಟುಸಿರಿನಿಂ ಹಲ್ಗಳಕಟಿ ಕಟಿ ಕಡೆವುತುಬ್ಬಸ ತೋರಿ ನಿಂದಕಠಿಣ ಮೂರುತಿಯೆ ಶ್ರೀ ನರಸಿಂಹ [೨] ಕೊಬ್ಬಿದ ಹಿರಣ್ಯಕನುಬ್ಬ ಮುರಿವೆನೆಂದುಹೆಬ್ಬಾಗಿಲೊಳು ಸಂಜೆ ಮಬ್ಬಿನಲಿ ದನುಜನಗರ್ಭವ ನಖದಿಂದ ಇಬ್ಭಾಗವನು ಮಾಡಿಹಬ್ಬಿದ ಕರುಳನು ಹರುಷದಿ ಧರಿಸಿದೆ…
-
Enidu Roopa Shri Narahare
Composer : Shri Pradyumna Tirtharu ಏನಿದು ರೂಪ ಶ್ರೀ ನರಹರೆ [ಪ] ಏನಿದು ರೂಪವೋ ಮನಸಿಜನಯ್ಯನೇನೆನಿಸಿದವರ ಹೃದ್ವನಜದೊಳ್ ಮೆರೆವುದೂ [ಅ.ಪ] ಮಾರನ ಪಿತನೆಂದು ಕರೆಸಿ ಕೊಂಬುವನಿಗೆಮೋರೆಯೊಳ್ ಮೂರು ಕಣ್ಣುಗಳ ಧರಿಸಿರುವುದು (೧) ಪರಮ ಶಾಂತನೆಂದು ಮೆರೆಯುವೀ ಶ್ರುತಿಯೊಳುಕ್ರೂರ ರೂಪದಿಂದ ನರರಿಗೆ ತೋರ್ಪುದು (೨) ವರ ವೈಜಯಂತಿಯ ಕೊರಳೊಳ್ ಧರಿಸುವಗೆಕರುಳ ಹಾರವ ಧರಿಸಿ ವರ ಶಬ್ದ ಮಾಳ್ಪುದು (೩) ನಾನೇ ದೇವರು ಮತ್ತು ಅನ್ಯರಿಲ್ಲೆಂಬುವಕನಕ ಕಶ್ಯಪ ಮುಖ್ಯ ದನುಜರ ಸೀಳ್ವುದು (೪) ತರಳ ಕರದಾಕ್ಷಣದಿ ವರ ವೈಕುಂಠವ…
