-
Teralidaru Vijayarayaru
Composer : Shri Jagannatha dasaru ತೆರಳಿದರು ವಿಜಯರಾಯರು ವಿಜಯ ವಿಠಲನಪುರದೊಳಗೆ ಪರಮ ಭಕ್ತರ ಕಾಣಬೇಕೆನುತ ||ಪ|| ಯುವ ಸಂವತ್ಸರದ ಕಾರ್ತಿಕ ಶುದ್ಧ ದಶಮಿ ವಿಭಕರವು ಗುರುವಾರ ಪ್ರಥಮ ಯಾಮದೀಪವನಾಂತರಾತ್ಮಕ ಶ್ರೀ ಹರಿಯ ದರ್ಶನೋತ್ಸವ ಸಂಪಾದಿಸುವ ಬಹು ಲವಲವಿಕೆಯಿಂದ ||೧|| ಧರಣಿಯೊಳು ಬಾಸ್ಕರ ಕ್ಷೇತ್ರವೆನಿಸುವ ಚಿಪ್ಪಗಿರಿಯೆಂಬ ಗ್ರಾಮದಿ ವಿಬುಧರ ಮುಖದಿವರ ಭಾಗವತ ಬ್ರಹ್ಮಸೂತ್ರ ಭಾರತ ಗೀತಮರುತ ಶಾಸ್ತ್ರಾರ್ಥ ಗ್ರಂಥಗಳನಾಲಿಸುತಾ ||೨|| ಸುಖತೀರ್ಥ ಮುನಿಯ ಮನಕನುಕೂಲ ಸಚ್ಛಾಸ್ತ್ರನಿಕರಗಳ ಕವನ ರೂಪದಲಿ ರಚಿಸಿಭಕುತರಿಗೆ ಸನ್ಮಾರ್ಗ ತೋರಿ ಸಂತೋಷದಲಿವಿಖನಸಾರ್ಚಿತ ಜಗನ್ನಾಥ ವಿಠಲನ…
