-
Tirupati Venkataramana
Composer : Shri Purandara dasaru ತಿರುಪತಿ ವೆಂಕಟರಮಣ ನಿನಗೇತಕೆ ಬಾರದು ಕರುಣನಂಬಿದೆ ನಿನ್ನಯ ಚರಣ ಪರಿಪಾಲಿಸಬೇಕೋ ಕರುಣ (೧) ಅಳಗಿರಿಯಿಂದಲಿ ಬಂದ ಸ್ವಾಮಿ ಅಂಜನಗಿರಿಯಲಿ ನಿಂದಕೊಳಲು ಧ್ವನಿಯದೋ ಚಂದ ನಮ್ಮ ಕುಂಡಲರಾಯ ಮುಕುಂದ (೨) ಬೇಟೆಯಾಡುತ ಬಂದ ಸ್ವಾಮಿ ಬೆಟ್ಟದ ಮೇಲೆ ನಿಂದನೀಟುಗಾರ ಗೋವಿಂದ ಅಲ್ಲಿ ಜೇನು ಸಕ್ಕರೆಯನು ತಿಂದ (೩) ಮೂಡಲ ಗಿರಿಯಲಿ ನಿಂತ ಮುದ್ದು ವೆಂಕಟಪತಿ ಬಲವಂತಈಡಿಲ್ಲ ನಿನಗೆ ಶ್ರೀಕಾಂತ ಈ ಈರೇಳು ಲೋಕಕನಂತ (೪) ಆಡಿದರೆ ಸ್ಥಿರವಪ್ಪ ಅಬದ್ಧಗಳಾಡಲು ಒಪ್ಪಬೇಡಿದ ವರಗಳನಿಪ್ಪ…
