Kanakadasaru

  • Nanu Neenu Ennadiro

    Composer : Shri Kanakadasaru ನಾನು ನೀನು ಎನ್ನದಿರೊ ಹೀನ ಮಾನವ || ಪ ||ಜ್ಞಾನದಿಂದ ನಿನ್ನ ನೀನೆ ತಿಳಿದು ನೋಡೆಲೊ ಪ್ರಾಣಿ || ಅ ಪ || ಹೆಣ್ಣು ಹೊನ್ನು ಮಣ್ಣು ಮೂರು ನಿನ್ನವೇನೆಲೊ |ಅನ್ನದಿಂದ ಬಂದ ಕಾಯ ನಿನ್ನದೇನೆಲೊ ||ಕರ್ಣದಿಂದ ಬರುವ ಘೋಷ ನಿನ್ನದೇನೆಲೊ |ನಿನ್ನ ಬಿಟ್ಟು ಹೋಹ ಜೀವ ನಿನ್ನದೇನೆಲೊ || ೧ || ಹಲವು ಜನ್ಮದಿಂದ ಬಂದಿರುವನು ನೀನೆಲೊ |ಮಲದ ಗರ್ಭದಲಿ ನಿಂದಿರುವನು ನೀನೆಲೊ ||ಜಲದ ದಾರಿಯಲಿ ಬಂದಿರುವನು ನೀನೆಲೊ |ಕುಲವು…

  • Bhajisi Badukelo Manava

    Composer : Shri Kanakadasaru ರಾಗ: ಕಲ್ಯಾಣಿ, ಖಂಡಛಾಪುತಾಳ ಭಜಿಸಿ ಬದುಕೆಲೊಮಾನವ || ಪ ||ಅಜಭವೇಂದ್ರಾದಿಗಳು ಪೂಜಿಸುವ ಪಾದವನು || ಅ ಪ || ಪಾಕಶಾಸನಗೊಲಿದು ಬಲಿಯ ಮೆಟ್ಟಿದಪಾದ|ಕಾಕುಶಕಟನ ಒದ್ದು ಕೊಂದ ಪಾದ ||ನಾಕಭೀಕರ ಬಕನ ಮೆಟ್ಟಿ ಸೀಳಿದ ಪಾದ |ಲೋಕಪಾವನೆ ಗಂಗೆ ಪುಟ್ಟಿದ ಪಾದವನು || ೧ || ಶಿಲೆಯಾದ ಅಹಲ್ಯೆಯನು ಶುದ್ಧ ಮಾಡಿದ ಪಾದ |ಒಲಿದು ಪಾರ್ಥನ ರಥವನೊತ್ತಿದ ಪಾದ ||ಕಲಿ ಸುಯೋಧನನ ಓಲಗದಿ ಕೆಡಹಿದ ಪಾದ |ಬಲಿದ ಕಾಳಿಂಗನ ಪೆಡೆ ತುಳಿದ ಪಾದವನು…

  • Baayi Naridamele

    Composer : Shri Kanakadasaru ಬಾಯಿ ನಾರಿದ ಮೇಲೆ ಏಕಾಂತವೆತಾಯಿ ತೀರಿದ ಮೇಲೆ ತವರಾಸೆಯೆ, ಮನವೆ ||ಪ|| ಕಣ್ಣು ಕೆಟ್ಟ ಮೇಲೆ ಕಡುರೂಪ ಚೆಲ್ವಿಕೆಯೆ,ಬಣ್ಣಗುಂದಿದ ಮೇಲೆ ಬಹುಮಾನವೆ,ಪುಣ್ಯತೀರಿದ ಮೇಲೆ ಪರಲೋಕ ಸಾಧನವೆ,ಸುಣ್ಣವಿಲ್ಲದ ವೀಳ್ಯವದು ಸ್ವಾದುಮಯವೆ ||೧|| ಕಿಲುಬಿನಾ ಬಟ್ಟಲೊಳು ಹುಳಿ ಕಲಸಿ ಉಣ ಬಹುದೆ,ಚಳಿಯುರಿಗೆ ಚಂದನದ ಲೇಪ ಹಿತವೆ,ಮೊಲೆಬಿದ್ದ ಹೆಣ್ಣಿನೊಳು ಮೋಹಕ್ಕೆ ಸೊಗಸಹುದೆ,ಬೆಲೆಬಿದ್ದ ಸರಕಿನೊಳು ಲಾಭವುಂಟೆ ||೨|| ಪಥ್ಯ ಸೇರದ ಮೇಲೆ ನಿತ್ಯ ಸುಖವೆನಬಹುದೆ,ಸತ್ತ್ವ ತಗ್ಗಿದ ಮೇಲೆ ಸಾಮರ್ಥ್ಯವೆ,ಪೃಥ್ವಿಯೊಳು ಕಾಗಿನೆಲೆಯಾದಿಕೇಶವ ನಿನ್ನ,ಭಕ್ತಿಯಿಲ್ಲದ ನರಗೆ ಮುಕ್ತಿಯು ಉಂಟೆ? ||೩||…

error: Content is protected !!