-
Toredu jeevisabahude
Composer : Shri Kanakadasaru ತೊರೆದು ಜೀವಿಸಬಹುದೆ ಹರಿ ನಿನ್ನ ಚರಣಗಳ || ಪ ||ಬರಿದೆ ಮಾತೇಕಿನ್ನು ಅರಿತು ಪೇಳುವೆನಯ್ಯ || ಅ ಪ || ತಾಯಿ ತಂದೆಯ ಬಿಟ್ಟು ತಪವ ಮಾಡಲಿ ಬಹುದು |ದಾಯಾದಿ ಬಂಧುಗಳ ಬಿಡಲು ಬಹುದು ||ರಾಯ ತಾ ಮುನಿದರೆ ರಾಜ್ಯವನೆ ಬಿಡಬಹುದು |ಕಾಯಜಪಿತ ನಿನ್ನ ಅಡಿಯ ಬಿಡಲಾಗದೊ || ೧ || ಒಡಲು ಹಸಿಯಲು ಅನ್ನವಿಲ್ಲದಲೆ ಇರಬಹುದು |ಪಡೆದ ಕ್ಷೇತ್ರವ ಬಿಟ್ಟು ಹೊರಡಬಹುದು ||ಮಡದಿ ಮಕ್ಕಳ ಕಡೆಗೆ ತೊಲಗಿಸಿ ಬಿಡಬಹುದು |ಕಡಲೊಡೆಯ…
-
Baayi Naridamele
Composer : Shri Kanakadasaru ಬಾಯಿ ನಾರಿದ ಮೇಲೆ ಏಕಾಂತವೆತಾಯಿ ತೀರಿದ ಮೇಲೆ ತವರಾಸೆಯೆ, ಮನವೆ ||ಪ|| ಕಣ್ಣು ಕೆಟ್ಟ ಮೇಲೆ ಕಡುರೂಪ ಚೆಲ್ವಿಕೆಯೆ,ಬಣ್ಣಗುಂದಿದ ಮೇಲೆ ಬಹುಮಾನವೆ,ಪುಣ್ಯತೀರಿದ ಮೇಲೆ ಪರಲೋಕ ಸಾಧನವೆ,ಸುಣ್ಣವಿಲ್ಲದ ವೀಳ್ಯವದು ಸ್ವಾದುಮಯವೆ ||೧|| ಕಿಲುಬಿನಾ ಬಟ್ಟಲೊಳು ಹುಳಿ ಕಲಸಿ ಉಣ ಬಹುದೆ,ಚಳಿಯುರಿಗೆ ಚಂದನದ ಲೇಪ ಹಿತವೆ,ಮೊಲೆಬಿದ್ದ ಹೆಣ್ಣಿನೊಳು ಮೋಹಕ್ಕೆ ಸೊಗಸಹುದೆ,ಬೆಲೆಬಿದ್ದ ಸರಕಿನೊಳು ಲಾಭವುಂಟೆ ||೨|| ಪಥ್ಯ ಸೇರದ ಮೇಲೆ ನಿತ್ಯ ಸುಖವೆನಬಹುದೆ,ಸತ್ತ್ವ ತಗ್ಗಿದ ಮೇಲೆ ಸಾಮರ್ಥ್ಯವೆ,ಪೃಥ್ವಿಯೊಳು ಕಾಗಿನೆಲೆಯಾದಿಕೇಶವ ನಿನ್ನ,ಭಕ್ತಿಯಿಲ್ಲದ ನರಗೆ ಮುಕ್ತಿಯು ಉಂಟೆ? ||೩||…
-
Andhakananuja – mundige
Composer : Shri Kanakadasaru Expln by Shri Kesava Rao Tadipatri ಮಂಗಲಂ ಜಯ ಮಂಗಲಂ ಮಂಗಲಂ ಜಯ ಮಂಗಲಂಅಂಧಕನನುಜನ ಕಂದನ ತಂದೆಯ ಕೊಂದನ ಶಿರದಲಿ ನಿಂದವನಚೆಂದದಿ ಪಡೆದನ ನಂದನೆಯಳನೊಲವಿಂದದಿ ಧರಿಸಿದ ಮುಕುಂದನಿಗೆ | ೧ | ರಥವನಡರಿ ಸುರಪಥದಲಿ ತಿರುಗುವ ಸುತನಿಗೆ ಶಾಪವನಿತ್ತವನಖತಿಯನ್ನು ತಡೆದನ ಸತಿಯ ಜನನಿ ಸುತ ಸತಿಯರನಾಳಿದ ಚತುರನಿಗೆ | ೨ | ಹರಿಯ ಮಗನ ಶಿರ ಹರಿದನ ತಂದೆಯ ಹಿರಿಯ ಮಗನ ತಮ್ಮನ ಪಿತನಭರದಿ ಭಕ್ಶಿಸುವನ ಶಿರದಲಿ ನಟಿಸಿದ ವರಕಾಗಿನೆಲೆಯಾದಿಕೇಶವರಾಯಗೆ…
